
ಕಳಸ ಲೈವ್ ವರದಿ
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಶುಕ್ರವಾರ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಶ್ರೀ ವರ್ಧುತ್ಯುತ್ಸವ ನಡೆಯಿತು.
1973ರ ಮೇ 5ರಂದು ನೂತನವಾಗಿ ನಿರ್ಮಿಸಿದ ಶಿಲಾಮಯ ದೇವಾಲಯದಲ್ಲಿ ಶ್ರೀ ಆದಿಶಕ್ತಿ ದೇವಿಯ ಪ್ರತಿಷ್ಠೆ, ಶ್ರೀ ಉದ್ಬವ ಗಣಪತಿ ಸ್ವಾಮಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠಾಪನೆಯನ್ನು ನೆರವೇರಿಸಲಾಗಿತ್ತು.

ಆ ಪುಣ್ಯ ದಿನದ ವರ್ಧಂತ್ಯುತ್ಸವವನ್ನು ವೈಶಾಖ ಮಾಸ ಶುಕ್ಲ ಪಕ್ಷ ತದಿಗೆಯಂದು ಶ್ರೀ ಜಗನ್ಮಾತೆಯ ದಿವ್ಯ ಸನ್ನಿಧಿಯಲ್ಲಿ ವಿವಿಧ ಹೋಮಗಳು ಪಾರಾಯಣ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.
ಕ್ಷೇತ್ರದಲ್ಲಿ ಬೆಳಿಗ್ಗೆ ಜಗನ್ಮಾತೆಗೆ ಅಭಿಷೇಕ, ಮಹಾಗಣಪತಿ ಹೋಮ, ಚಂಡಿಕಾ ಹೋಮ, ಲಲಿತಾ ಹೋಮ, ಲಕ್ಷ್ಮೀನಾರಾಯಣ ಹೃದಯ ಹೋಮ, ರಾಮತಾರಕ ಹೋಮ, ಅನ್ನಪೂರ್ಣ ಮೂಲಮಂತ್ರ ಹೋಮ, ಬಾಲತ್ರಿಪುರ ಸುಂದರಿ ಹೋಮ, ಗಾಯತ್ರಿ ಹೋಮ, ನವಗ್ರಹ ಹೋಮ, ರುದ್ರಹೋಮ, ವೇದ ಪಾರಾಯಣ ನಡೆಯಿತು.

ಊರ ಭಕ್ತಾಧಿಗಳು ಸೇರಿದಂತೆ ರಾಜ್ಯ ಹೊರರಾಜ್ಯಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ದೇವರಿಗೆ ಪೂಜೆ ಸಲ್ಲಿಗೆ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮಕರ್ತರಾದ ಜಿ.ಭೀಮೇಶ್ವರ ಜೋಷಿ, ಟ್ರಸ್ಟಿಗಳಾದ ರಾಜಲಕ್ಷ್ಮೀ ಜೋಷಿ, ರಾಮನಾರಾಣ ಜೋಷಿ, ರಾಜಗೋಪಾಲ ಜೋಷಿ ಇದ್ದರು.
