
ಕಳಸ ಲೈವ್ ವರದಿ
ಕಳಸ ಪಟ್ಟಣದ ಸರ್ಕಾರಿ ಪಬ್ಲಿಕ್ ಸ್ಕೂಲ್ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ಭದ್ರಾನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಕಳಸ ಪಬ್ಲಿಕ್ ಸ್ಕೂಲ್ ನಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಳೆಹೊಳೆ ಮೂಲದ ವಿದ್ಯಾರ್ಥಿ ಮೂಲದ ಶ್ರೇಯಸ್ ಎಂಬ ವಿದ್ಯಾರ್ಥಿ ಮಾರ್ಚ್ 16ರಿಂದ ಕಾಣೆಯಾಗಿದ್ದ. ಶಾಲೆ ಬಿಟ್ಟ ನಂತರ ವಿದ್ಯಾರ್ಥಿ ಮನೆಗೆ ತೆರಳಿರಲಿಲ್ಲ. ಈ ಬಗ್ಗೆ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿದ್ಯಾರ್ಥಿ ಪತ್ತೆಗಾಗಿ ಹುಡುಕಾಟ ನಡೆಸಲಾಗಿತ್ತು. ಮಂಗಳವಾರ ಸಂಜೆ ಕಳಸ ಬಾಳೆಹೊಳೆ ನಡುವಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಶವವನ್ನು ಮೇಲೆತ್ತಿ ಪರಿಶೀಲಿಸಲಾಗಿ ಅದು ನಾಪತ್ತೆಯಾಗಿದ್ದ ವಿದ್ಯಾರ್ಥಿಯದೆಂದು ಗುರುತು ಹಿಡಿಯಲಾಗಿದೆ.
ವಿದ್ಯಾರ್ಥಿ ಮೂಲತಃ ಬೇಲೂರು ತಾಲ್ಲೂಕಿನವನಾಗಿದ್ದು, ಸುರೇಶ್ ಶೆಟ್ಟಿ ಮತ್ತು ಜಯಂತಿ ಎಂಬುವವರ ಪುತ್ರ. ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ಕಳಸ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಹೋಗುತ್ತಿದ್ದ. ಕಾಣೆಯಾಗಿದ್ದ ದಿನ ಭಾನುವಾರವಾಗಿದ್ದು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಎಕ್ಟ್ರಾ ಕ್ಲಾಸ್ ಇದೆ ಎಂದು ಬೆಳಿಗ್ಗೆ 7.30ಗೆ ಮನೆ ಬಿಟ್ಟಿದ್ದ ಶ್ರೇಯಸ್ ಮತ್ತೆ ಮನೆ ಮರಳಿ ಬರಲಿಲ್ಲ.
ಇದೀಗ ಈ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ಹಲವು ಅನುಮಾನಗಳು ಮೂಡಿವೆ.
ಆದರೆ ಶ್ರೇಯಸ್ಸ್ ಶಾಲೆ ಮುಗಿಸಿ ತನ್ನ ಐದು ಜನ ಸಹಪಾಠಿಗಳ ಜೊತೆ ಹಳುವಳ್ಳಿ ಸಮೀಪ ಭದ್ರಾ ನದಿಗೆ ಹೋಗಿ ಅಲ್ಲಿ ಈಜಲು ನದಿಗಿಳಿದಿದ್ದಾರೆ. ಈ ಮದ್ಯೆ ಶ್ರೇಯಸ್ಸ್ ನದಿಯಲ್ಲಿ ಮುಳುಗಿದ್ದಾನೆ.ಇದನ್ನು ಕಂಡು ಗಾಬರಿಗೊಂಡ ಉಳಿದ ಐದು ಜನ ವಿದ್ಯಾರ್ಥಿಗಳು ಆತನ ಶಾಲಾ ಬ್ಯಾಗ್ ಬಟ್ಟೆ ಬರೆಯನ್ನು ನದಿಗೆಸೆದು ಏನು ತಿಳಿದಂತೆ ತಮ್ಮ ತಮ್ಮ ಮನೆಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಬುಧವಾರ ಠಾಣೆಗೆ ಡಿವೈಎಸ್ಪಿ ಬಾಲಾಜಿ ಸಿಂಗ್ ಬೇಟಿ ನೀಡಿದ್ದಾರೆ.ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ರಾಜಶೇಖರ್ ಮಾರ್ಗದರ್ಶನದಲ್ಲಿ ತನಿಖೆ ನಡೆಯುತ್ತಿದೆ.
ಬಾಲಕನ ಪೋಷಕರು ಪ್ರಕರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ತನಿಖೆ ನಡೆಸುವಂತೆ ದೂರು ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.