
ಕಳಸ ಲೈವ್ ವರದಿ
ಕಳಸ-ಹೊರನಾಡು ಮಧ್ಯೆ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಕಾಮಗಾರಿ ನಡೆಯುತ್ತಿದ್ದ ಹಿನ್ನಲೆಯಲ್ಲಿ ಕಳೆದ ಕೆಲ ತಿಂಗಳಿನಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಸೇತುವೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಇಂದಿನಿಂದ(ಮೇ7) ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ.
ಸೇತುವೆ ಕಾಮಗಾರಿ ನಡೆಯುತ್ತಿದ್ದ ಹಿನ್ನಲೆಯಲ್ಲಿ ಹೊರನಾಡು ದೇವಸ್ಥಾನಕ್ಕೆ ಹೋಗುವ ಭಕ್ತಾಧಿಗಳು ಮತ್ತು ಆ ಭಾಗದ ಗ್ರಾಮಸ್ಥರು ಹಳುವಳ್ಳಿ-ದಾರಿಮನೆ ಮೂಲಕ ಅತ್ಯಂತ ಕಿರಿದಾದ ರಸ್ತೆಯಲ್ಲಿ ಸುತ್ತಿ ಬಳಸಿ ಪ್ರಯಾಣ ಬೆಳೆಸಬೇಕಾದ ಅನಿವಾರ್ಯತೆ ಎದುರಾಗಿತ್ತು.ಇದರಿಂದ ತುಂಬಾ ತೊಂದರೆಗಳನ್ನು ಕೂಡ ಅನುಭವಿಸಬೇಕಾಗಿತ್ತು.
ಆದರೆ ಇದೀಗ ಹೆಬ್ಬಾಳೆ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಹೊರನಾಡು ದೇವಸ್ಥಾನಕ್ಕೆ ಹೋಗುವ ಭಕ್ತರು ಮತ್ತು ಆ ಭಾಗದ ಗ್ರಾಮಸ್ಥರು ಪ್ರಯಾಣಕ್ಕೆ ಈ ರಸ್ತೆಯನ್ನು ಬಳಸಿಕೊಳ್ಳಬಹುದಾಗಿದೆ.