
ಕಳಸ ಲೈವ್ ವರದಿ
ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ. ಕಾಂತರಾಜ್ (೪೫) ಮೃತ ಪೊಲೀಸ್ ಪೇದೆ.
ಕಾಂತರಾಜ್ ಮೂಲತಃ ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದವರು. ಪ್ರಸ್ತುತ ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾಂತರಾಜ್, ಈ ಹಿಂದೆ ಎ. ಎನ್. ಎಫ್. ಹಾಗೂ ಕಳಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಅಪಘಾತದಲ್ಲಿ ಬಲಗಾಲು ಕಳೆದುಕೊಂಡಿದ್ದ ಕಾಂತರಾಜ್ ಅವರಿಗೆ ಕೃತಕ ಕಾಲು ಜೋಡಣೆ ಮಾಡಲಾಗಿತ್ತು. ಆ ನಂತರ ಕೆಲಸ ಸಹ ಮಾಡುತ್ತಿದ್ದರು. ಇಂದು ಮನೆಯಲ್ಲಿ ಯಾರು ಇಲ್ಲದೆ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.