ಕಳಸ ಲೈವ್
ಕಳಸ: ಇಲ್ಲಿನ ಭದ್ರಾ ನದಿಯ ಅಂಬಾತೀರ್ಥದಲ್ಲಿ ವ್ಯಕ್ತಿಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸಂತೋಷ (27) ಎಂಬ ಯುವಕ ಕಾಣೆಯಾಗಿದ್ದು, ನೀರಿನಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿದೆ.
ಕೋಲಾರದಿ0ದ ಪ್ರವಾಸಕ್ಕೆ ಬಂದಿದ್ದ ಒಂಬತ್ತು ಮಂದಿಯ ತಂಡ ಅಂಬಾತೀರ್ಥದಲ್ಲಿ ಸ್ನಾನಕ್ಕೆ ಇಳಿದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ನಾನ ಮಾಡುವಾಗ ಒಬ್ಬ ಯುವಕ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದಂತೆ ಸಹಯಾತ್ರಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಳುಗಿದ ಯುವಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
